ಕ್ರೀಡೆ

ಅಂತಿಮ ಟೆಸ್ಟ್ ನಲ್ಲೂ ಮುಂದುವರಿದ ಭಾರತದ ಬ್ಯಾಟರ್‌ಗಳ ವೈಫಲ್ಯ: ಕೇವಲ 185 ರನ್‌ಗೆ ಆಲೌಟ್

ಆಸ್ಟ್ರೇಲಿಯ, ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯ ತಂಡಗಳ ನಡುವಿನ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತದ ಬ್ಯಾಟರ್ ಗಳ ಕಳಪೆ ಪ್ರದರ್ಶನ ಮುಂದುವರಿದಿದ್ದು ಇಡೀ ತಂಡ ಮೊದಲ ಇನಿಂಗ್ಸ್‌ನಲ್ಲಿ ಕೇವಲ 185 ರನ್‌ಗಳಿಗೆ ಆಲೌಟಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡದ ಬ್ಯಾಟರ್‌ಗಳು ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (40) ಹೊರತುಪಡಿಸಿ, ಉಳಿದ ಯಾರೂ ಉತ್ತಮ ಪ್ರದರ್ಶನ ನೀಡಲಿಲ್ಲ.

ಫಾರ್ಮ್ ಕಳೆದುಕೊಂಡಿರುವ ನಾಯಕ ರೋಹಿತ್ ಶರ್ಮ ಬದಲು ಶುಭಮನ್ ಗಿಲ್ ಪಂದ್ಯದಲ್ಲಿ ಸ್ಥಾನ ಪಡೆದರು. ಆದರೆ ಅವರು ಉತ್ತಮ ಪ್ರದರ್ಶನ ನೀಡಲು ವಿಫಲರಾದರು. ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ತಾವು ಎದುರಿಸಿದ ಮೊದಲನೇ ಬಾಲ್ ನಲ್ಲೇ ಶೂನ್ಯಕ್ಕೆ ಔಟಾದರು. ಈ ಎಲ್ಲ ಹಿನ್ನಲೆಯಲ್ಲಿ ಭಾರತ ತಂಡ ಕೇವಲ 185 ರನ್ ಪೇರಿಸುವಷ್ಟರಲ್ಲಿ ಆಲ್ ಔಟ್ ಆಗಿದೆ.

ಆಸ್ಟ್ರೇಲಿಯಾ ಪರ ಸ್ಕಾಟ್ ಬೋಲಂಡ್ ನಾಲ್ಕು ವಿಕೆಟ್‌ಗಳನ್ನು ಪಡೆದು ಯಶಸ್ವಿ ಬೌಲರ್ ಆದರು. ಉಳಿದಂತೆ, ಮಿಚೆಲ್ ಸ್ಟಾರ್ಕ್ ಮೂರು ವಿಕೆಟ್, ಪ್ಯಾಟ್ ಕಮಿನ್ಸ್ ಎರಡು ವಿಕೆಟ್ ಹಾಗೂ ನಥಾನ್ ಲಯಾನ್ ಒಂದು ವಿಕೆಟ್ ಗಳಿಸಿದ್ದಾರೆ.

admin

Share
Published by
admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

1 year ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

1 year ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

2 years ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

2 years ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 years ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 years ago