ರಾಜ್ಯ

ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೊರಗಿಟ್ಟು ಬಜೆಟ್ ಪೂರ್ವಭಾವಿ ಸಭೆ: ವೆಲ್ಫೇರ್ ಪಾರ್ಟಿ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 -26 ನೇ ಸಾಲಿನ ಬಜೆಟ್ ಮಂಡನೆ ಮಾಡಲು ನಡೆಸುತ್ತಿರುವ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಅಲ್ಪಸಂಖ್ಯಾತರ ಮುಖಂಡರನ್ನು ಹೊರಗಿಟ್ಟು ಸಭೆ ನಡೆಸುವುದು ಅತ್ಯಂತ ಕೀಳು ಮಟ್ಟದ ರಾಜಕಾರಣ ವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಅಲ್ಪಸಂಖ್ಯಾತರ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಮತ ಬೆಂಬಲ ನೀಡಿತ್ತು ರಾಜ್ಯದಲ್ಲಿ ಆಡಳಿತ ಹಾಗೂ ಕೇಂದ್ರಕ್ಕೆ ಒಂಬತ್ತು ಲೋಕಸಭಾ ಸದಸ್ಯರನ್ನು ಆರಿಸುವ ಮೂಲಕ ಈ ರಾಜ್ಯದ ಅಲ್ಪಸಂಖ್ಯಾತರ ಪಾತ್ರ ಮಹತ್ವದಾಗಿತ್ತು ಆದರು ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಮುದಾಯದ ನಾಯಕರನ್ನು ಕಡೆಗಣಿಸಿರುವುದು ವಿಷಾದಕಾರ ಸಂಗತಿಯಾಗಿದೆ.

ಇದು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಹಾಗೂ ಸಮುದಾಯಕ್ಕೆ ಮಾಡಿರವು ಅಪಮಾನ ವಾಗಿದೆ.ಸಮುದಾಯ ವನ್ನು ಹೊರಗಿಟ್ಟು ಮಾಡುವ ಈ ಸಭೆ ಕೇವಲ ಕಾಟಾಚಾರದ ಸಭೆ ಆಗಲಿದೆ ಎಂದು ಅವರು ಹೇಳಿದ್ದಾರೆ.

ಮುಸ್ಲಿಂ ಸಮುದಾಯವನ್ನು ಕೇವಲ ಮತ ಬ್ಯಾಂಕ್ ಆಗಿ ಬಳಸುವ ಕಾಂಗ್ರೆಸ್ ಚಾಳಿ ಇದರಿಂದ ಬಹಿರಂಗ ಗೊಂಡಿದೆ.ಸಮುದಾಯದ ಮುಖಂಡರು ಈಗಲಾದರೂ ಎಚ್ಚತುಕೊಳ್ಳ ಬೇಕು ಮತ್ತು ಸಿದ್ದರಾಮಯ್ಯನವರ ಈ ನಡೆಯನ್ನು ಪ್ರಶ್ನಿಸಬೇಕೆಂದು ಅವರು ತಾಹಿರ್ ಹುಸೇನ್ ಆಗ್ರಹಿಸಿದ್ದಾರೆ.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

1 year ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

1 year ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

2 years ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

2 years ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 years ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 years ago