ರಾಜ್ಯ

ಗೋವಾ ಅರ್ಚಕರು ಲೂಟಿಕೋರರು ಹೇಳಿಕೆ: ಕೊಂಕಣಿ ಲೇಖಕರ ವಿರುದ್ಧ FIR

ಮಡಗಾಂವ್: “ಗೋವಾದ ಅರ್ಚಕರು ಲೂಟಿಕೋರರು” ಎಂದು ಹೇಳಿಕೆ ನೀಡಿದ್ದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೊಂಕಣಿ ಸಾಹಿತಿ ದತ್ತ ದಾಮೋದರ್ ನಾಯಕ್ ವಿರುದ್ಧ ಕಾಣಕೋಣ ಪೊಲೀಸರು ದೂರು ದಾಖಲಿಸಿದ್ದಾರೆ. ಈ ಪ್ರಕರಣ ಧಾರ್ಮಿಕ ಹಾಗೂ ಸಾಹಿತ್ಯಿಕ ವಲಯದಲ್ಲಿ ತೀವ್ರ ವಿವಾದವನ್ನು ಹುಟ್ಟುಹಾಕಿದೆ.

ಕಾಣಕೋಣ ನಿವಾಸಿ ಸತೀಶ್ ಭಟ್ ಎಂಬುವವರು ಧಾರ್ಮಿಕ ಭಾವನಗಳಿಗೆ ಧಕ್ಕೆ ತಂದಿದ್ದಾರೆ ಎಂದು ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹೇಳಿಕೆ ದೇವಾಲಯಗಳು, ಅರ್ಚಕರು ಮತ್ತು ಮಠಗಳಿಗೆ ಸಂಬಂಧಿಸಿದ ನಾಯಕ್ ಅವರ ಹೇಳಿಕೆ ಆಕ್ಷೇಪಾರ್ಹವಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಾಯಕ್ ಅವರು “ಲೂಟಿ ಎಂಬ ಶಬ್ದಕ್ಕೆ ಬದಲಾಗಿ ಬೇರೆ ಪದ ಬ್ಲಾಸಬಹುದಿತ್ತು. ಹಣ ಸುಲಿಗೆ ಮಾಡುತ್ತಾರೆ ಎಂಬ ಅರ್ಥದಲ್ಲಿ ಮಾತ್ರ ನಾನು ಹೇಳಿದ್ದೆ” ಎಂದು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

ಸ್ಥಳೀಯ ವಾಹಿನಿಯೊಂದಕ್ಕೆ ಅವರು ನೀಡಿದ್ದ ಸಂದರ್ಶನದಲ್ಲಿ, “ದೇವರು ಮತ್ತು ಧರ್ಮಕ್ಕೆ ನಾನು ಒಂದು ಪೈಸೆಯೂ ಕೊಡುವುದಿಲ್ಲ. ದೇಗುಲಗಳು ಹಣವನ್ನು ಲೂಟಿ ಮಾಡುತ್ತಿವೆ. ಈ ಅರ್ಚಕರು, ಪರ್ತಗಾಳಿ ಮಠ ಹಾಗೂ ದೇವಾಲಯಗಳು ನನ್ನನ್ನು ಲೂಟಿ ಮಾಡುವ ಸಾಧ್ಯತೆ ಇತ್ತು” ಎಂದು ಹೇಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

4 hours ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

2 weeks ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 month ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 month ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 months ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 months ago