ರಾಷ್ಟ್ರ

ನಮಗೆ ಕೈಕೋಳ ತೊಡಿಸಲಾಗಿತ್ತು, ಕಾಲುಗಳಿಗೆ ಸರಪಳಿ ಹಾಕಲಾಗಿತ್ತು. US ನಿಂದ ಗಡಿಪಾರಾದ ಭಾರತೀಯ ವ್ಯಕ್ತಿ

ಹೊಸದಿಲ್ಲಿ: “ನಮಗೆ ಕೈಕೋಳ ತೊಡಿಸಿ, ಕಾಲುಗಳನ್ನು ಸರಪಳಿಯಿಂದ ಬಿಗಿಯಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ಬಿಡಿಸಲಾಯಿತು” ಎಂದು ಅಮೆರಿಕದಿಂದ ಗಡಿಪಾರುಗೊಂಡಿರುವ ಹರ್ಯಾಣ ಮೂಲದ ಜಸ್ ಪಾಲ್ ಸಿಂಗ್ ತಿಳಿಸಿದ್ದಾರೆ.

ಹುಟ್ಟೂರಿಗೆ ತಲುಪಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂಬ ಅರಿವು ನಮಗೆ ಇರಲಿಲ್ಲ. ಬೇರೆ ಶಿಬಿರಕ್ಕೆ ಕರೆದೊಯ್ಯುತ್ತಿದ್ದಾರೆ ಎಂದು ಭಾವಿಸಿದ್ದೆವು. ಆದರೆ ಬಳಿಕ ಪೊಲೀಸ್ ಅಧಿಕಾರಿಗಳು ಭಾರತಕ್ಕೆ ಕರೆದೊಯ್ಯುತ್ತಿರುವುದಾಗಿ ತಿಳಿಸಿದರು. ಈ ವೇಳೆ ಕೈಕೋಳ ತೊಡಿಸಿ, ಕಾಲುಗಳಿಗೆ ಸರಪಳಿ ಹಾಕಲಾಯಿತು. ಅಮೃತಸರ ವಿಮಾನ ನಿಲ್ದಾಣ ತಲುಪಿದ ಮೇಲೆಯೇ ಅವುಗಳನ್ನು ತೆಗೆಯಲಾಯಿತು” ಎಂದು ವಿವರಿಸಿದರು.

“ಟ್ರಾವೆಲ್ ಏಜೆಂಟ್‌ ವಂಚನೆಗೆ ಒಳಗಾದೆ”

ಅಮೆರಿಕಕ್ಕೆ ಕಾನೂನುಬದ್ಧ ಪ್ರವೇಶ ಕೊಡಿಸುವುದಾಗಿ ಭರವಸೆ ನೀಡಿ ಟ್ರಾವೆಲ್ ಏಜೆಂಟ್ ವಂಚಿಸಿರುವುದಾಗಿ ಜಸ್ ಪಾಲ್ ಸಿಂಗ್ ಆರೋಪಿಸಿದರು. “ಅಮೆರಿಕದ ವೀಸಾ ಬಂದ ಬಳಿಕ ನನ್ನನ್ನು ಕಳುಹಿಸುವಂತೆ ಕೇಳಿದ್ದೆ. 30 ಲಕ್ಷ ರೂಪಾಯಿಗೆ ವ್ಯವಹಾರ ಕುದಿರಿತ್ತು. ಆದರೆ ಆತ ವಂಚನೆ ಮಾಡಿದ್ದಾನೆ” ಎಂದು ಅಳಲು ತೋಡಿಕೊಂಡರು.

“ಕಳೆದ ಜುಲೈನಲ್ಲಿ ನಾನು ವಿಮಾನ ಮೂಲಕ ಬ್ರೆಜಿಲ್ ತಲುಪಿದ್ದೆ. ನಂತರ ಅಮೆರಿಕಕ್ಕೆ ವಿಮಾನದಲ್ಲಿ ಕರೆದೊಯ್ಯುವುದಾಗಿ ಹೇಳಿದ್ದರು. ಆದರೆ, ಟ್ರಾವೆಲ್ ಏಜೆಂಟ್‌ಗಳು ವಂಚನೆ ಮಾಡಿ, ಅಕ್ರಮವಾಗಿ ಗಡಿ ದಾಟುವಂತೆ ಬಲವಂತ ಮಾಡಿದರು” ಎಂದು ಅವರು ವಿವರಿಸಿದರು.

104 ಭಾರತೀಯ ಅಕ್ರಮ ವಲಸಿಗರನ್ನು ಗಡಿಪಾರು ಮಾಡಿದ ಅಮೆರಿಕ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಕ್ರಮ ವಲಸೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಬುಧವಾರ ಸಂಜೆ 104 ಭಾರತೀಯ ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಸೇನಾ ವಿಮಾನ ಅಮೃತಸರದಲ್ಲಿ ಬಂದಿಳಿದಿದೆ.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

11 months ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

12 months ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 year ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 year ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

1 year ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

1 year ago