ರಾಜ್ಯ

4 ಮಕ್ಕಳನ್ನು ಕಾಲುವೆಗೆಸೆದು ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಮಕ್ಕಳು ಮೃತ್ಯು, ತಾಯಿ ಪಾರು

ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ತಾಯಿ ಭಾಗ್ಯ ಎನ್ನುವವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಮಕ್ಕಳನ್ನು ತನು ನಿಂಗರಾಜ ಭಜಂತ್ರಿ (5), ರಕ್ಷಾ ಭಜಂತ್ರಿ (3), ಹಸನ್ ನಿಂಗರಾಜ ಭಜಂತ್ರಿ (2), ಹುಸೇನ್ ಭಜಂತ್ರಿ ಎಂದು ಗುರುತಿಸಲಾಗಿದೆ.

ಇವರು ಮೂಲತಃ ಕೊಲಾರ ಜಿಲ್ಲೆಯ ತೆಲಗಿ ಗ್ರಾಮದ ನಿವಾಸಿಗಳು ಎಂದು ಮಾಹಿತಿ ದೊರಕಿದೆ. ಇಬ್ಬರು ಮಕ್ಕಳ ಮೃತದೇಹಗಳನ್ನು ಮೀನುಗಾರರು ಹೊರತೆಗೆದಿದ್ದು, ಉಳಿದಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಿಡಗುಂದಿ ಠಾಣೆಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

11 months ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

12 months ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 year ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 year ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

1 year ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

1 year ago