ರಾಜ್ಯ

ಬಜೆಟ್ – ಕರ್ನಾಟಕಕ್ಕೆ ಚೊಂಬು, ಕೃಷಿ, ದಲಿತ, ಅಲ್ಪಸಂಖ್ಯಾತರಿಗೆ ದ್ರೋಹ: SDPI

ಬೆಂಗಳೂರು: ಕೇಂದ್ರ ಸರ್ಕಾರದ 2025-26 ನೇ ಸಾಲಿನ ಬಜೆಟ್ ಮೋದಿ ಸರ್ಕಾರ ಕಳೆದ 10 ವರ್ಷಗಳಿಂದ ಮಾಡಿಕೊಂಡು ಬರುತ್ತಿರುವಂತೆ ಜನ ದ್ರೋಹಿ ಬಜೆಟ್ ಆಗಿದೆ. ಬಜೆಟ್ ನಲ್ಲಿ ಎಂದಿನಂತೆ ಕರ್ನಾಟಕ್ಕೆ ಚೊಂಬು ಕೊಡಲಾಗಿದೆ. ಮಧ್ಯಮ ವರ್ಗಕ್ಕೆ ಆದಾಯ ತೆರಿಗೆಯಲ್ಲಿ ಒಂದಷ್ಟು ರಿಯಾಯಿತಿ ನೀಡುವ ಮೂಲಕ ಅವರ ಮೂಗಿಗೆ ತುಪ್ಪ ಸವರಲಾಗಿದೆ. ರೈತರು, ಕೃಷಿ ಕ್ಷೇತ್ರ ಮತ್ತು ಗ್ರಾಮೀಣ ಪ್ರದೇಶಗಳ ಜನರಿಗೆ ಬರೆ ಎಳೆಯಲಾಗಿದೆ ಮತ್ತು ದಲಿತ, ಅಲ್ಪಸಂಖ್ಯಾತ ಸಮುದಾಯಗಳಿಗೆ ಬಹಿರಂಗ ದ್ರೋಹ ಬಗೆದಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ತಮ್ಮ ಪತ್ರಿಕಾ ಪ್ರಕಟಣೆಯ ತಮ್ಮ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಈ ಬಜೆಟ್ ನಲ್ಲಿ ಕರ್ನಾಟಕದ ಯಾವುದೇ ನೀರಾವರಿ, ರೈಲ್ವೆ, ಕೈಗಾರಿಕೆಗಳಿಗೆ ಯಾವುದೇ ವಿಶೇಷ ಅನುದಾನ ಒದಗಿಸಲಾಗಿಲ್ಲ. ತಮ್ಮ ರಾಜಕೀಯ ಲಾಭಕ್ಕೆ ಕುಮಾರಸ್ವಾಮಿಯವರು ಪ್ರತಿನಿಧಿಸುವ ಮಂಡ್ಯ ಕ್ಷೇತ್ರಕ್ಕೆ ಒಂದಷ್ಟು ಹಣ ನೀಡಿರುವುದು ಬಿಟ್ಟರೆ ರಾಜ್ಯಕ್ಕೆ ಯಾವುದೇ ರೀತಿಯಲ್ಲೂ ಯಾವುದೇ ಹೊಸ ಯೋಜನೆ, ಹಣ ದೊರಕಿಲ್ಲ. ಅರ್ಥಾತ್ ಕರ್ನಾಟಕ ರಾಜ್ಯಕ್ಕೆ ಎಂದಿನಂತೆ ಮೋದಿ ಸರ್ಕಾರ ಚೊಂಬು ನೀಡಿದೆ. ಆದರೆ ಇದರ ವಿರುದ್ಧ ಕರ್ನಾಟಕದ ಯಾವುದೇ ಸಂಸದರು ತುಟಿ ಬಿಚ್ಚುವುದಿಲ್ಲ. ಬಿಜೆಪಿ ಸಂಸದರು ಬಿಡಿ ಅವರು ಮೋದಿ, ಶಾ ಹೇಳಿದರೆ ಕರ್ನಾಟಕವನ್ನು ದಾನವಾಗಿ ನೀಡಲೂ ಸಿದ್ದವಾಗುತ್ತಾರೆ. ಅವರು ಮೋದಿ, ಶಾ ಎದುರು ನಿಂತುಕೊಳ್ಳುವ ಧೈರ್ಯವೂ ಇಲ್ಲ. ಅಡ್ಡಬಿದ್ದು ಬರುವುದೊಂದೇ ಗೊತ್ತು. ಕಾಂಗ್ರೆಸ್ ಸಂಸದರೂ ಹೆಚ್ಚೇನೂ ಪ್ರತಿರೋಧ ಒಡ್ಡುವುದಿಲ್ಲ. ಮಾಧ್ಯಮಗಳ ಮುಂದೆ ಒಂದಷ್ಟು ಅರಚಾಡಿ ಬೆಚ್ಚಗೆ ಮಲಗಿ ಬಿಡುತ್ತಾರೆ. ಒಟ್ಟಿನಲ್ಲಿ ಕರ್ನಾಟಕಕ್ಕೆ ಏನೇ ಅನ್ಯಾಯ ಆದರೂ ಹೇಳುವವರು, ಕೇಳುವವರು ಯಾರೂ ಇಲ್ಲ. ಅದೇ ಧೈರ್ಯದಲ್ಲಿ ಮೋದಿ ಸರ್ಕಾರ ಕರ್ನಾಟಕಕ್ಕೆ ಬೇರೆ ಯಾವುದೇ ರಾಜ್ಯಕ್ಕೆ ಮಾಡದ ಮಟ್ಟದಲ್ಲಿ ದ್ರೋಹ ಬಗೆಯುತ್ತದೆ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ದೇಶದ ಬೆನ್ನೆಲುಬಾದ ರೈತರು, ಕೃಷಿ ಕ್ಷೇತ್ರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಈ ಬಜೆಟ್ ನಲ್ಲಿ ಬರೆ ಎಳೆಯಲಾಗಿದೆ. ಅವರ ಪ್ರತಿಭಟನೆಗಳಿಗೆ ಪ್ರತಿಯಾಗಿ ಅವರ ಮೇಲೆ ಸೇಡು ತೀರಿಸಿಕೊಳ್ಳುವ ಕಾರ್ಯವನ್ನು ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಒದಗಿಸುವ, ಆ ಮೂಲಕ ಒಂದಷ್ಟು ಆದಾಯ ತಂದುಕೊಡುವು ನರೇಗಾ ಯೋಜನೆಗೆ ಕಳೆದ ಬಜೆಟ್ ಗಿಂತ 3,154 ಕೋಟಿ ರೂಪಾಯಿ ಕಡಿಮೆ ಹಣ ನೀಡಲಾಗಿದೆ. ಕಳೆದ ಬಾರಿ 89,154 ಕೋಟಿ ಪಡೆದಿದ್ದ ಈ ಯೋಜನೆ, ಈ ಬಾರಿ ಕೇವಲ 8,600 ಕೋಟಿ ರೂಪಾಯಿ ಮಾತ್ರ ಪಡೆದಿದೆ. ಇನ್ನು ಅತಿಹೆಚ್ಚು ಅನುದಾನ ಪಡೆಯಬೇಕಿದ್ದ ನೀರಾವರಿ ಕ್ಷೇತ್ರಕ್ಕೆ ಕೇವಲ 8260 ಕೋಟಿ ರೂಪಾಯಿ, ಅಂದರೆ ಕಳೆದ ಬಾರಿಗಿಂದ ಕೇವಲ 10 ಕೋಟಿ ರೂಪಾಯಿ ಮಾತ್ರ ಹೆಚ್ಚಿಗೆ ನೀಡಲಾಗಿದೆ. ಇನ್ನು ರೈತರನ್ನು ಆತ್ಮಹತ್ಯೆಯಿಂದ ಕಾಪಾಡಬಹುದಾದ ಬೆಳೆ ವಿಮೆ ಕ್ಷೇತ್ರಕ್ಕೆ ಕೇವಲ 12,242 ಕೋಟಿ ಮಾತ್ರ ಮೀಸಲಿಡಲಾಗಿದೆ. ಇದು ಕಳೆದ ಬಾರಿಗಿಂತ ಸುಮಾರು 3,600 ಕೋಟಿ ಕಡಿಮೆಯಾಗಿದೆ. ಇದು ಕೃಷಿ ಕ್ಷೇತ್ರ ವಿರುದ್ಧ ಮೋದಿ ಸರ್ಕಾರಕ್ಕೆ ಇರುವ ಅಸಹನೆಯನ್ನು ತೋರಿಸುತ್ತದೆ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಬಹಿರಂಗವಾಗಿಯೇ ದ್ರೋಹ ಬಗೆಯಲಾಗಿದೆ. ಎಸ್.ಟಿ ಸಮುದಾಯಕ್ಕೆ ನೀಡುವ ನ್ಯಾಷನಲ್ ಫೆಲೋಷಿಪನ್ನು 165 ಕೋಟಿಯಿಂದ ಕೇವಲ ಎರಡು ಲಕ್ಷಕ್ಕೆ ಇಳಿಸಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿವೇತನವನ್ನು ಸುಮಾರು 1000 ಕೋಟಿ ಇಂದ ಕೇವಲ 197.50 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ ಇದು ದೊಡ್ಡ ದ್ರೋಹ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ಕಿಡಿ ಕಾರಿದ್ದಾರೆ.

ಆದಾಯ ತೆರಿಗೆ ಮಿತಿ ಏರಿಕೆ ಒಂದನ್ನು ಬಿಟ್ಟು, ಸಾಮಾನ್ಯ ಜನರಿಗೆ ಅನುಕೂಲವಾಗುವ ಯಾವ ಅಂಶವೂ ಈ ಬಜೆಟ್ ನಲ್ಲಿ ಇಲ್ಲ. ಇನ್ನು ಆದಾಯ ತೆರಿಗೆ ವಿಚಾರಕ್ಕೆ ಬರುವುದಾದರೆ. ಜನರ ಆದಾಯವೇ ಮಾಯವಾಗಿರುವಾಗ ತೆರಿಗೆ ಮಿತಿ ಏರಿಕೆ ಯಾವ ಪುರುಷಾರ್ಥಕ್ಕೆ ಎಂದು ಕೇಳಬೇಕಾಗುತ್ತದೆ ಎಂದು ಮಜೀದ್ ಅವರು ತಮ್ಮ ಪ್ರಕಟಣೆಯಲ್ಲಿ ವ್ಯಂಗ್ಯವಾಡಿದ್ದಾರೆ.

admin

Recent Posts

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

2 weeks ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 month ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 month ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 months ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 months ago

ಕಲಬುರಗಿಯಲ್ಲಿ ಹೃದಯಾಘಾತದಿಂದ ಕಾರ್ಮಿಕನ ಮೃತ್ಯು. ಮೃತದೇಹ ರಸ್ತೆಯಲ್ಲಿ ಎಳೆದೊಯ್ದು ಅವಮಾನ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯಿರುವ ಸಿಮೆಂಟ್ ಕಂಪನಿಯಲ್ಲಿ ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟಿರುವ…

2 months ago