ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಗಿಡದ ಮುದ್ದೇನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಟಾಟಾ ಏಸ್ ವಾಹನದಲ್ಲಿ ‘ಜೈ ಭೀಮ್’ ಹಾಡು ಹಾಕಿದ್ದಕ್ಕೆ ರೈಲ್ವೆ ಪೊಲೀಸ್ ಚಂದ್ರಶೇಖರ್ ಎಂಬುವವರು ಯುವಕರಿಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ. ಹಲ್ಲೆಯ ಸಂದರ್ಭದಲ್ಲಿ ಯುವಕನೋರ್ವನ ಮರ್ಮಾಂಗಕ್ಕೆ ಕಾಲಿನಿಂದ ಒದ್ದಿದ್ದಾರೆ ಎಂದು ದೂರಲಾಗಿದೆ. ತುಮಕೂರು ತಾಲ್ಲೂಕಿನ ಸಿರಿವರ ಗ್ರಾಮದ ದೀಪು (19) ಹಾಗೂ ಚಾಲಕ ನರಸಿಂಹ ಮೂರ್ತಿ ಹಲ್ಲೆಗೊಳಗಾದ ಯುವಕರಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಯುವಕರು, ಟಾಟಾ ಏಸ್ ನಲ್ಲಿ ಅಂಬೇಡ್ಕರ್ ಅವರ ಜೈಭೀಮ್ ಹಾಡು ಹಾಕಿಕೊಂಡು ಹೋಗುತ್ತಿದ್ದೆವು. ಈ ವೇಳೆ ರೈಲ್ವೆ ಪೊಲೀಸ್ ಚಂದ್ರಶೇಖರ್ ಹಾಗೂ ನರಸಿಂಹರಾಜು ಇಬ್ಬರು ಬೈಕ್ ನಲ್ಲಿ ಬಂದು ಅಡ್ಡಗಟ್ಟಿ ಗಲಾಟೆ ಮಾಡಿದರು. ಅಂಬೇಡ್ಕರ್ ಹಾಡು ಯಾಕೇ ಹಾಕಿದ್ದೀರಾ? ನಿಮ್ಮ ಜಾತಿ ಯಾವುದು ಎಂದು ಪ್ರಶ್ನಿಸಿದರು. ಜಾತಿ ಕೇಳಿ, ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…
ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…
ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…
ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…
ರಾಂಚಿ: ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…
ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…