ರಾಜ್ಯ

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ಕ್ರಮ ಮೂರ್ಖತನದ್ದು: ಎಸ್.ಡಿ.ಪಿ.ಐ

ಬೆಂಗಳೂರು, 15 ಫೆಬ್ರವರಿ 2025: ಇಲ್ಲದ ನೆಪ ಹೇಳಿ ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾದ 10 ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಮೂರ್ಖತನದಿಂದ ಕೂಡಿದೆ. ಉತ್ತಮ ಶಿಕ್ಷಣ ಮತ್ತು ಎಲ್ಲರಿಗೂ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕಾದ ಸರ್ಕಾರ ಇರುವ ವಿವಿಗಳನ್ನು ಮುಚ್ಚುವ ಮೂಲಕ ಸಾಕಷ್ಟು ಜನರ ಉದ್ಯೋಗ ಕಸಿಯುವುದರ ಜೊತೆಗೆ ತಮ್ಮದೇ ಜಿಲ್ಲೆಯ ವಿವಿ ಮೂಲಕ ಉನ್ನತ ವ್ಯಾಸಂಗ ಮಾಡುವ ಸ್ಥಳೀಯ ವಿದ್ಯಾರ್ಥಿಗಳ ಅನುಕೂಲಗಳನ್ನು ಇಲ್ಲವಾಗಿಸುತ್ತಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಕಿಡಿ ಕಾರಿದ್ದಾರೆ.

ಮುಂದುವರಿದ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ವಿವಿಗಳ ಸಂಖ್ಯೆ ಜನಸಂಖ್ಯೆಯ ಅನುಪಾತದಲ್ಲಿ ನೋಡಿದರೆ ಬಹಳ ಕಡಿಮೆ. ಇಂತಹ ಸನ್ನಿವೇಶದಲ್ಲಿ ಮತ್ತಷ್ಟು ಕಾಲೇಜು, ವಿವಿಗಳನ್ನು ರೂಪಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಆದರೆ ಕರ್ನಾಟಕ ಸರ್ಕಾರ ಇರುವ ವಿವಿ ಗಳನ್ನೇ ಮುಚ್ಚಲು ಹೊರಟಿದೆ. ಇದಕ್ಕೆ ಹಣಕಾಸಿನ ಕೊರತೆಯ ಸಮಸ್ಯೆಯನ್ನು ಮುಂದಿಡುತ್ತಿದೆ. ಈ 9 ವಿಶ್ವವಿದ್ಯಾನಿಲಯಗಳನ್ನು ನಡೆಸಲು ವಾರ್ಷಿಕ 342 ಕೋಟಿ ಬೇಕಾಗುತ್ತದೆ ಎಂದು ವರದಿ ಹೇಳುತ್ತಿದೆ. ವಾರ್ಷಿಕ 3.50 ಲಕ್ಷ ಕೋಟಿ ಬಜೆಟ್ ಮಂಡಿಸುವ ಕರ್ನಾಟಕ ರಾಜ್ಯದಲ್ಲಿ 350 ಕೋಟಿ ಇದಕ್ಕಾಗಿ ಮೀಸಲಿಡಲು ಸಾಧ್ಯವಿಲ್ಲವೇ? ರಾಜಕಾರಣಿಗಳಿಗೆ ಸೌಲಭ್ಯ ಒದಗಿಸುವ ನೆಪದಲ್ಲಿ ವ್ಯಯವಾಗುವ ಹಣದಲ್ಲಿ 10-20% ಕಡಿತ ಮಾಡಿದರೂ ಇಷ್ಟೂ ವಿವಿಗಳು ಯಾವುದೇ ಸಮಸ್ಯೆ ಇಲ್ಲದೆ ಕಾರ್ಯನಿರ್ವಹಿಸಬಹುದು. ಕುಂಭಮೇಳದಲ್ಲಿ ಶಾಸಕರನ್ನು ಸ್ನಾನ ಮಾಡಿಸಲು ಸರ್ಕಾರ 50-60 ಲಕ್ಷ ರೂಪಾಯಿ ಖರ್ಚುಮಾಡಲು ಸಿದ್ದತೆ ನಡೆದಿದೆ ಎಂದು ಕೇಳಿದ್ದೇನೆ. ವಿವಿಗಳಿನ್ನು ನಡೆಸಲು ಹಣಕಾಸಿನ ಕೊರತೆಯಾಗುತ್ತಿದೆ ಯಾದರೆ ಇದೆಲ್ಲ ಏನು? ಎಂದು ಮಜೀದ್ ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

ಸರ್ಕಾರ ಇಂತಹ ಕುಂಟು ನೆಪಗಳನ್ನು ಮುಂದಿಟ್ಟು ರಾಜ್ಯದ ಭವಿಷ್ಯದ ಜೊತೆ ಚೆಲ್ಲಾಟವಾಡದೆ. ವಿವಿಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮಜೀದ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

11 months ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

12 months ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 year ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 year ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

1 year ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

1 year ago